ಆದರೆ, ಮೂರು ಪ್ರಕರಣಗಳು ಮುಕ್ತಾಯಗೊಂಡಿದ್ದ ಕಾರಣ ಲೋಕಾಯುಕ್ತರ ಮೇಲೆ ಕುಪಿತಗೊಂಡಿದ್ದ. ಈ ಕುರಿತು ಲೋಕಾಯುಕ್ತರನ್ನು ಕೇಳಲು ಹೋದಾಗ, '' ಸಾಕ್ಷ್ಯಾಧಾರಗಳು ಇಲ್ಲದಿದ್ದರೆ ಮುಕ್ತಾಯಗೊಳಿಸಲಾಗುತ್ತದೆ. ಅಂತಹ ಬಲವಾದ ಸಾಕ್ಷಿಗಳಿದ್ದರೆ ಒದಗಿಸಿ. ಇಲ್ಲದಿದ್ದರೆ ಸಂಸ್ಥೆಯ ಸಮಯ ವ್ಯರ್ಥ ಮಾಡಬೇಡಿ,''ಎಂದು ಬುದ್ದಿವಾದ ಹೇಳಿದ್ದರು.