ಬೆಂಗಳೂರಿನಲ್ಲಿ ಖ್ಯಾತ ಲೇಖಕ ಜಿ.ಬಿ ಹರೀಶ್ ಅವರು ಕನ್ನಡಕ್ಕೆ ತಂದಿರುವ ವೀರ ಸಾವರ್ಕರ್ ಅವರ ಹಿಂದುತ್ವ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅನಂತ್ ಕುಮಾರ್ ಹೆಗಡೆ, ಬುದ್ಧಿಜೀವಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದುತ್ವ ಸಮುದ್ರವಿದ್ದಂತೆ, ಹಿಂದುತ್ವ ಸತ್ಯವನ್ನು ಒಪ್ಪಿಕೊಳ್ಳುತ್ತದೆ. ಶ್ರೇಷ್ಠ ವಿಚಾರಗಳು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ಅದನ್ನು ಹಿಂದುತ್ವ ಸ್ವೀಕರಿಸುತ್ತದೆ. ಆದರೆ ಈ ಹಿಂದುತ್ವವನ್ನು ಬುದ್ಧಿಜೀವಿಗಳು ಒಪ್ಪುವುದಿಲ್ಲ, ಏಕೆಂದರೆ ಅವರ ತಲೆಯಲ್ಲಿ ಮೂರ್ಖತನವನ್ನೇ ತಿಂಬಿಕೊಂಡಿದ್ದಾರೆ. ವಿದೇಶಿ ಬಂಡವಾಳಕ್ಕೆ ತಮ್ಮನ್ನು ಮಾರಿಕೊಂಡಿರುವ ಬುದ್ಧಿಜೀವಿಗಳು ಹಿಂದುತ್ವವನ್ನು ಕುಗ್ಗಿಸಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.