ಜಲಪಾತದ ತುದಿಗಳಲ್ಲಿ ಭದ್ರತೆಗಳನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಘಟಪ್ರಭಾ ಅಣೆಕಟ್ಟಿನಿಂದ ಈ ತಿಂಗಳು ಜಲಪಾಕಕ್ಕೆ ನೀರು ಬಿಡುವ ಸಾಧ್ಯತೆಗಳಿದ್ದು, ಜಲಪಾತದ ನೀರಿನ ವೇಗ ಮತ್ತಷ್ಟು ಹೆಚ್ಚಾಗಲಿದೆ. ಇದು ಬಹುತೇಕ ಪ್ರವಾಸಿಗರ ಕಣ್ಮನವನ್ನು ಸೆಳೆಯಲಿದೆ. ನೀರು ಬಿಡುಗಡೆ ಮಾಡುವುದಕ್ಕೂ ಮುನ್ನ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.