ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಮೇಲ್ಮನೆ ಮಾಜಿ ಸದಸ್ಯ ಗೋ.ಮಧುಸೂದನ್,''ಕರ್ನಾಟಕ ಮುಕ್ತ ವಿವಿ 2013-14 ರಿಂದ ಮಾನ್ಯತೆ ಕಳೆದುಕೊಂಡಿದೆ. ಇದುವರೆಗೂ ವಿವಿಗೆ ಮಾನ್ಯತೆ ದೊರೆತಿಲ್ಲ. ಅಂದಿನಿಂದ ಯಾವುದೇ ಶೈಕ್ಷಣಿಕ ಚಟುವಟಿಕೆ ನಡೆಯದೇ ವಿವಿ ಕೋಮಾ ಸ್ಥಿತಿಯಲ್ಲಿದೆ. ಇದಕ್ಕೆ ರಂಗಪ್ಪ ಅವರೇ ನೇರವಾಗಿ ಕಾರಣರಾಗಿದ್ದು ಇಂಥವರನ್ನು ಉನ್ನತ ಶಿಕ್ಷಣ ಮಂಡಳಿಗೆ ನೇಮಿಸಬಾರದು,'' ಎಂದು ಆಗ್ರಹಿಸಿದರು.