ರಾಜ್ಯದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಮಾತನಾಡಿ ಡಿಕೆ ಶಿವಕುಮಾರ್ ಕಾನೂನು ಪ್ರಕಾರ ಆದಾಯ ತೆರಿಗೆ ಇಲಾಖೆಗೆ ದಾಖಲೆ ಸಲ್ಲಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕರನ್ನೇ ಗುರುತಿಸಿ ಐಟಿ ದಾಳಿ ನಡೆಸುವ ಕೇಂದ್ರ ಸರ್ಕಾರದ ನಡೆ ಸಂಬಂಧ ಸಾಕಷ್ಟು ಬಾರಿ ಪ್ರಸ್ತಾಪಿಸಲಾಗಿದೆ. ಐಟಿ ಇಲಾಖೆಯನ್ನು ಕೇಂದ್ರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದರು.