ಶಿವಕುಮಾರ ಸ್ವಾಮಿಜಿ( ಸಂಗ್ರಹ ಚಿತ್ರ)
ರಾಜ್ಯ
ಬಿಜಿಎಸ್ ಆಸ್ಪತ್ರೆಗೆ ಸಿದ್ದಗಂಗಾ ಶ್ರೀಗಳು ದಾಖಲು: ಸಿಎಂ ಭೇಟಿ ಆರೋಗ್ಯ ವಿಚಾರಣೆ
ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯ ಆರೋಗ್ಯ ತಪಾಸಣೆಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ...
ಬೆಂಗಳೂರು: ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯ ಆರೋಗ್ಯ ತಪಾಸಣೆಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ.
ಸ್ವಾಮೀಜಿಯವರು ಆರೋಗ್ಯವಾಗಿದ್ದಾರೆ. ಈ ಹಿಂದೆ ಸ್ಟಂಟ್ ಅಳವಡಿಸಿರುವುದರಿಂದ ವೈದ್ಯರ ಸಲಹೆ ಮೇರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆ ತೆರಳಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಇನ್ನೂ ಶ್ರೀಗಳು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಬಿಜಿಎಸ್ ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಶ್ರೀಗಳಿಗೆ ಯಾವುದೇ ತೊಂದರೆಯಿಲ್ಲ, ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ