ರಾಮನಗರ: ಕಾವೇರಿ ಜಲಾನಯನ ಪ್ರದೇಶ ರೈತರಿಗೆ ನೀರಿನ ಕೊರತೆಯಾಗುವುದಿಲ್ಲ,. ರೈತರ ಅಗತ್ಯಕ್ಕೆ ಅನುಗುಣವಾಗಿ ನೀರು ಬಿಡಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಎಚ್ ಡಿ ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ.
ರಾಮನಗರ ತಾಲೂಕಿನ ಪೇಟೆಕುರುಬರಹಳ್ಳಿ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಾಲಯ ಉದ್ಘಾಟಿಸಿ ಮಾತನಾಡಿದ ಅವರು,ಕಾವೇರಿ ನದಿಯಿಂದ ಮಂಡ್ಯಭಾಗದ ರೈತರ ಕಬ್ಬು ಹಾಗೂ ಭತ್ತದ ಬೆಳೆಗಳಿಗೆ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಕಾಲುವೆಗಳಿಗೆ ನೀರು ಬಿಡುವ ಸಂಬಂಧ ಕಾವೇರಿ ನೀರು ನಿರ್ವಹಣಾ ಮಂಡಳಿಯ ಆದೇಶಕ್ಕಾಗಿ ಕಾಯಲಾಗದು. ಯಾವುದೇ ತಾಂತ್ರಿಕ ಹಾಗೂ ಕಾನೂನಾತ್ಮಕ ಸಮಸ್ಯೆ ಬಂದರೂ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.