ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ರಾಜ್ಯ ಸರ್ಕಾರ ಹಲವು ಸಲಹೆ ನೀಡಿತ್ತು. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಕೂಡ ಮನವಿ ಮಾಡಿಕೊಂಡಿತ್ತು. ಕಾವೇರಿ ವಿವಾದ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಇದು ಎರಡು ರಾಜ್ಯಗಳ ಹಿತಾಸಕ್ತಿಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈಗಾಗಲೇ ರೈತರು ಪ್ರತೀ 10 ದಿನಗಳಿಗೊಮ್ಮೆ ನದಿಯ ಒಳ ಹಾಗೂ ಹೊರ ಹರಿವಿನ ನೀರನ್ನು ಪರಿಶೀಲನೆ ನಡೆಸಿ ಕಾಲುವೆಗಳಿಗೆ ನೀರು ಹರಿಸುತ್ತಿರುವ ಸಮಿತಿಯ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರಸ್ತುತ ನಿರ್ವಹಣಾ ಮಂಡಳಿ ರಚನೆಯಲ್ಲಿರುವ ನಿಯಮಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಲು ರಾಜ್ಯದ ರೈತರು ಯತ್ನಗಳನ್ನು ನಡೆಸುತ್ತಿದ್ದಾರೆ. ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ತಿಳಿದ ಬಳಿಕ ಮುಂದಿನ ನಡೆಗಳನ್ನು ರೈತರು ಕೈಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.