ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳ ನೇಮಕ

ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳನ್ನು ಸೋಮವಾರ ನೇಮಕ ಮಾಡಿದ್ದು....
ಸಚಿವ ಡಿಕೆ ಶಿವಕುಮಾರ್
ಸಚಿವ ಡಿಕೆ ಶಿವಕುಮಾರ್
Updated on
ಬೆಂಗಳೂರು: ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳನ್ನು ಸೋಮವಾರ ನೇಮಕ ಮಾಡಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧದ ಸಂಘರ್ಷ ಕೈಬಿಟ್ಟು, ಸೌಹಾರ್ದದ ಹಾದಿ ತುಳಿಯಲು ಮುಂದಾಗಿದೆ.
ಕಾವೇರಿ ನೀರು ನಿರ್ವಹಣಾ ಮಂಡಳಿಗೆ ರಾಜ್ಯದಿಂದ ಇಬ್ಬರು ಅಧಿಕಾರಿಗಳ ಹೆಸರನ್ನು ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಈ ಸಂಬಂಧ ಇಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಜಲ‌ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ಕಾವೇರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಚ್ ಎಲ್ ಪ್ರಸನ್ನ ಅವರನ್ನು ರಾಜ್ಯದ ಪ್ರತಿನಿಧಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದರು. 
ಇದೇ ವೇಳೆ ಕಾವೇರಿ ಕುರಿತ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕರೊಂದಿಗೆ, ಸಂಸದರೊಂದಿಗೆ ಸಭೆ ನಡೆಸಲು ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಜೂನ್ 1ರಂದು ಕೇಂದ್ರ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿತ್ತು. ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com