ಈ ವೇಳೆ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡ ಅವರು, ಉದ್ಯೋಗಾವಕಾಶ ಸೃಷ್ಟಿಸಲು, ಯುವಕರಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಕೆಲಸ ಮಾಡಲಾಗುತ್ತಿದೆ. ಪದವಿ ಹಾಗೂ ಸ್ನಾತಕೋತ್ತರ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಸರಿಯಾಗಿ ದೊರಕಿದರೆ, ಸಮಸ್ಯೆಗಳು ಬಗೆಹರಿಯುವುದು. ಇದಲ್ಲದೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯಗಳಾದ ಸೂಕ್ತ ರೀತಿಯ ಶೌಚಾಲಯಗಳು, ಕ್ಯಾಂಟೀನ್ ಹಾಗೂ ಪ್ರಯೋಗಾಲಯಗಳ ಕುರಿತಂತೆಯೂ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.