ಶನಿವಾರ ಸಂಜೆ 6 ಗಂಟೆಗೆ ಶಾಲೆಯಿಂದ ಕರೆಯೊಂದು ಬಂದಿತ್ತು. ಈ ವೇಳೆ ನನ್ನ ಮಧ್ಯಾಹ್ನ 2 ಗಂಟೆಯಿಂದಲೂ ಕಾಣುತ್ತಿಲ್ಲ ಎಂದು ತಿಳಿಸಿದ್ದರು. ರಾತ್ರಿ 7.45ಕ್ಕೆ ನನ್ನ ಮಗ ಸಾವನ್ನಪ್ಪಿದ್ದಾನೆಂದು ತಿಳಿಸಿದರು. ಪುತ್ರನ ಮೃತದೇಹ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿತ್ತು ಎಂದು ಹೇಳಿದರು. ಕಂಪ್ಯೂಟರ್, ಕನ್ನಡ ಮತ್ತು ಆಡಳಿತ ಮಂಡಳಿ ಅಧಿಕಾರಿಗಳು ಹಾಗೂ ವಾರ್ಡನ್ ನನಗೆ ಹಿಂಸೆ ನೀಡುತ್ತಿದ್ದಾರೆಂದು ನನ್ನ ಮಗ ಈ ಹಿಂದಿನಿಂದಲೂ ಹೇಳುತ್ತಲೇ ಇದ್ದ. ಈ ಬಗ್ಗೆ ನಾನು ಉಪ ಪ್ರಾಂಶುಪಾಲರಿಗೆ ದೂರು ನೀಡಿದ್ದೆ. ಆದರೆ, ದೂರನ್ನು ಅವರು ನಿರ್ಲಕ್ಷಿಸಿದ್ದರು ಎಂದು ಮೃತ ವಿದ್ಯಾರ್ಥಿ ತಂದೆ ಪೂವಯ್ಯ ಅವರು ಹೇಳಿದ್ದಾರೆ.