ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ವಿವಾದದ ಬಗ್ಗೆ ಜೂ.18ರಂದೇ ಪತ್ರ ಬರೆದು ನಮ್ಮ ಅಭಿಪ್ರಾಯ ತಿಳಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೆವು. ಈ ಬಗ್ಗೆ ರಾಜ್ಯ ಸರ್ಕಾರದ ಪ್ರತಿನಿಧಿಗಳನ್ನು ಕರೆದು ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಮಾತಿಗೆ ತಪ್ಪಿ ರಾತ್ರೋರಾತ್ರಿ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.