ವರ್ಗಾವಣೆಗೊಂಡಿರುವ ಅಧಿಕಾರಿಗಳಿಗೆ ಹಾಲಿ ಅಧಿಕಾರಿಗಳು ಅಧಿಕಾರ ಹಸ್ತಾಂತರ ಮಾಡದೇ ಇರುವುದರಿಂದ 19 ಇಂಜಿನಿಯರ್ ಗಳ ಸ್ಥಿತಿ ಅತಂತ್ರವಾಗಿದೆ. ಪಿಡಬ್ಲ್ಯೂಡಿ ಇಲಾಖೆಯಿಂದ ನಡೆದಿರುವ ಅಧಿಕಾರಿಗಳ ವರ್ಗಾವಣೆಯ ಬಗ್ಗೆ ನೀರಾವರಿ ಸಚಿವರಿಗೆ ಅಸಮಾಧಾನ ಉಂಟುಮಾಡಿದ್ದು, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಅಸಮಾಧಾನಗೊಂಡಿದ್ದಾರೆ, ಅಷ್ಟೇ ಅಲ್ಲದೇ ಈ ವಿಷಯದಲ್ಲಿ ರೇವಣ್ಣ ಪ್ರಾಬಲ್ಯ ತೋರುತ್ತಿದ್ದಾರೆ, ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಜಲಸಂಪನ್ಮೂಲ ಇಲಾಖೆಗೆ ಇಂಜಿನಿಯರ್ ಗಳನ್ನು ಹೇಗೆ ವರ್ಗಾವಣೆ ಮಾಡಲಾಗಿದೆ ಎಂದೂ ಆಕ್ರೋಶಗೊಂಡಿದ್ದಾರೆ.