ಚಿಂಚೋಳಿ ಶಾಸಕರಾಗಿರುವ ಉಮೇಶ್ ಜಾಧವ್, ಚಿಂಚೋಳಿ ಪಟ್ಟಣದಲ್ಲಿ ನಡೆದ ಕಾರ ಹುಣ್ಣಿಮೆ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಮೊದಲು ಪೂಜೆ ಸಲ್ಲಿಸಿ ಚಕ್ಕಡಿ ಓಡಿಸಿ ಸಂಭ್ರಮಿಸಿದ ಜಾಧವ್, ನಂತರ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದರು, ಈ ವೇಳೆ ವೇಗವಾಗಿ ಒಡಿ ಬಂದ ಎತ್ತಿನ ಬಂಡಿ ನಿಂತಿದ್ದ ಗುಂಪಿನ ಮೇಲೆ ನುಗ್ಗಿದೆ.