ಕಾರ ಹುಣ್ಣಿಮೆ ಸಂಭ್ರಮಾಚರಣೆ ವೇಳೆ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಗೆ ಗಾಯ

ಕಾರಹುಣ್ಣಿಮೆ ಸಂಭ್ರಮಾಚರಣೆ ವೇಳೆ ವೇಗವಾಗಿ ಬಂದ ಬಂಡಿ ಶಾಸಕ ಡಾ.ಉಮೇಶ್ ಜಾಧವ್ ಕಾಲು ಮೇಲೆ ಹಾಯ್ದ ಪರಿಣಾಮ ಶಾಸಕರು ಗಾಯಗೊಂಡಿರುವ ...
ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಉಮೇಶ್ ಜಾಧವ್
ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಉಮೇಶ್ ಜಾಧವ್
Updated on
ಕಲಬುರಗಿ: ಕಾರಹುಣ್ಣಿಮೆ ಸಂಭ್ರಮಾಚರಣೆ ವೇಳೆ ವೇಗವಾಗಿ ಬಂದ ಬಂಡಿ ಶಾಸಕ ಡಾ.ಉಮೇಶ್ ಜಾಧವ್ ಕಾಲು ಮೇಲೆ ಹಾಯ್ದ ಪರಿಣಾಮ ಶಾಸಕರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ.
ಚಿಂಚೋಳಿ ಶಾಸಕರಾಗಿರುವ ಉಮೇಶ್ ಜಾಧವ್, ಚಿಂಚೋಳಿ ಪಟ್ಟಣದಲ್ಲಿ ನಡೆದ ಕಾರ ಹುಣ್ಣಿಮೆ ಉತ್ಸವದಲ್ಲಿ ಪಾಲ್ಗೊಂಡಿದ್ದರು.  ಮೊದಲು ಪೂಜೆ ಸಲ್ಲಿಸಿ  ಚಕ್ಕಡಿ ಓಡಿಸಿ ಸಂಭ್ರಮಿಸಿದ ಜಾಧವ್, ನಂತರ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದರು, ಈ ವೇಳೆ ವೇಗವಾಗಿ ಒಡಿ ಬಂದ ಎತ್ತಿನ ಬಂಡಿ ನಿಂತಿದ್ದ ಗುಂಪಿನ ಮೇಲೆ ನುಗ್ಗಿದೆ.
ಈ ವೇಳೆ ಉಮೇಶ್ ಜಾಧವ್ ಅವರ ಮೇಲೆ ಬಂಡಿ ಹಾಯ್ದಿದ್ದು, ಬಲಗಾಲು ಮತ್ತು ಭುಜಕ್ಕೆ ಗಾಯಗಳಾಗಿವೆ. ಸ್ವಲ್ಪದರಲ್ಲಿಯೇ ಜಾಧವ್ ಅವರು, ಭಾರಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರಿಗೆ ಗಾಯಗಳಾಗಿವೆ. 
ಇದೇ ವೇಳೆ ಎತ್ತಿನ ಬಂಡಿ ಮೇಲಿಂದ ಬಿದ್ದು 35 ವರ್ಷದ ರಾಜು ಚೌಹಾನ್ ಎಂಬಾತ ಮೃತ ಪಟ್ಟಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com