ಪ್ರಕರಣ ಸಂಬಂಧ 63ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ವಿದ್ವತ್ ಪರ ವಕೀಲ ಶ್ಯಾಮ್ ಸುಂದರ್ ಅವರು ನಲಪಾಡ್ ಗೆ ಜಾಮೀನು ನೀಡದಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ನಲಪಾಡ್ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ನೀಡುವಂತೆ ನ್ಯಾಯಧೀಶರಲ್ಲಿ ಮನವಿ ಮಾಡಿದರು. ಇನ್ನು ವಾದ-ವಿವಾದ ಆಲಿಸಿದ್ದ ನ್ಯಾಯಾಧೀಶರು ಆದೇಶವನ್ನು ಇಂದಿಗೆ ಮುಂದೂಡಿದ್ದರು.