ನಾಗರಹೊಳೆ ಅಭಯಾರಣ್ಯ: ಸಮೀಕ್ಷೆ ವೇಳೆ ಆನೆ ದಾಳಿಗೆ ಅರಣ್ಯಾಧಿಕಾರಿ ಬಲಿ

ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಗಢ ಸಂಭವಿಸಿದ್ದರ ಬಗ್ಗೆ ತಪಾಸಣೆ ನಡೆಸುತ್ತಿದ್ದ ಅರಣ್ಯಾಧಿಕಾರಿ ಮೇಲೆ ಆನೆ ದಾಳಿ ನಡೆಸಿದ್ದು, ಅರಣ್ಯಾಧಿಕಾರಿ ಮೃತಪಟ್ಟಿರುವ ಘಟನೆ ನಾಗರಹೊಳೆ ಅಭಯಾರಣ್ಯದಲ್ಲಿ ನಡೆದಿದೆ.
ಅರಣ್ಯ ಅಧಿಕಾರಿ
ಅರಣ್ಯ ಅಧಿಕಾರಿ
Updated on
ಮೈಸೂರು: ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಗಢ ಸಂಭವಿಸಿದ್ದರ ಬಗ್ಗೆ ತಪಾಸಣೆ ನಡೆಸುತ್ತಿದ್ದ ಅರಣ್ಯಾಧಿಕಾರಿ ಮೇಲೆ ಆನೆ ದಾಳಿ ನಡೆಸಿದ್ದು, ಅರಣ್ಯಾಧಿಕಾರಿ ಮೃತಪಟ್ಟಿರುವ ಘಟನೆ ನಾಗರಹೊಳೆ ಅಭಯಾರಣ್ಯದಲ್ಲಿ ನಡೆದಿದೆ. 
ಡಿಬಿ ಕುಪ್ಪೆ ಫಾರೆಸ್ಟ್ ರೇಂಜ್ ನಲ್ಲಿ ಈ ಘಟನೆ ನಡೆದಿದ್ದು, ಎಸ್ ಮಣಿಕಂಠನ್ (45) ಮೃತಪಟ್ಟ ಅಧಿಕಾರಿಯಾಗಿದ್ದಾರೆ.  ಪೊದೆಯ ಹಿಂದೆ ನಿಂತಿದ್ದ ಆನೆಯನ್ನು ಗಮನಿಸದೇ ಮಣಿಕಂಠನ್ ಪೊದೆಯ ಬಳಿ ಹೋಗಿದ್ದಾರೆ. ಈ ವೇಳೆ ದಾಳಿ ನಡೆದಿದ್ದು, ಅರಣ್ಯಾಧಿಕಾರಿ ಜೊತೆಗಿದ್ದ ರೇಂಜ್ ಫಾರೆಸ್ಟ್ ಅಧಿಕಾರಿ ಸುಬ್ರಹ್ಮಣ್ಯಸ್ವಾಮಿ ಸಹ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಗೆ ಹೆಚ್ ಡಿ ಕೋಟೆ ಬಳಿ ಇರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com