ಉತ್ಸವಕ್ಕೆ ದೇವೇಗೌಡರು ಪತ್ನಿ ಚನ್ನಮ್ಮನವರೊಂದಿಗೆ ತೆರಳಿದ್ದರು. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ಹಾಗೂ ಪುತ್ರ ಸೂರಜ್ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ದೇವೆಗೌಡರು ಚಾಲನೆ ನೀಡಿದರು. ಆದರೆ, ಭಕ್ತರು ಏಕಾಏಕಿ ಪೂಜೆ ರಥ ಎಳೆದಿದ್ದರಿಂದ ನೂಕುನುಗ್ಗಲು ಉಂಟಾಯಿತು.ಇದರಿಂದ ದೇವೇಗೌಡರ ಪತ್ನಿ ಚನ್ನಮ್ಮ ಒಮ್ಮೆಲೇ ಕಂಗಾಲಾದರು. ತಕ್ಷಣ ಜಾಗೃತರಾದ ಶಾಸಕ ರೇವಣ್ಣ ಹಾಗೂ ಅಂಗರಕ್ಷಕರು ಅವರನ್ನು ರಕ್ಷಿಸಿದ್ದಾರೆ.