ಸ್ವಾತಂತ್ರ್ಯಪೂರ್ವದಿಂದಲೂ ಬಾಬಾಬುಡನ್ಗಿರಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲೇ ಇದೆ. ಆದರೆ, 'ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ' ಎಂದು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನಿಸಿರುವ ಸರಕಾರ, ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ. ಇದನ್ನು ವಿರೋಧಿಸಿ ನ್ಯಾಯಾಂಗ ಹೋರಾಟ ನಡೆಸಲಾಗುವುದು. ಜನರಿಂದಲೂ ಸಂಕಲ್ಪ ಮಾಡಿಸಿ ದತ್ತ ಪೀಠ ಉಳಿಸಿ ಅಭಿಯಾನ ನಡೆಸಲಾಗುವುದು,'' ಎಂದು ಸ್ಪಷ್ಟವಾಗಿ ಹೇಳಿದರು.