ರಾಜ್ಯಪಾಲರು ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳ ಕುಲಪತಿಗಳಾಗಿರುತ್ತಾರೆ. ಹೀಗಿದ್ದರೂ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಮುದ್ರಣಗೊಂಡಿರುವ ಆಹ್ವಾನ ಪತ್ರಿಕೆಯಲ್ಲಿ ರಾಜ್ಯಪಾಲರ ಹೆಸರನ್ನೇ ಮರೆಯಲಾಗಿದೆ. ಮಾ.07 ರಂದು ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸಂಸತ್ ಸದಸ್ಯರು, ರಾಜ್ಯಸಭಾ ಸದಸ್ಯರು, ರಾಜ್ಯ ಸಚಿವರು, ಎಂಎಲ್ ಸಿ ಗಳು, ಬೆಂಗಳೂರು ಮೇಯರ್, ಅಧಿಕಾರಿಗಳು ಹಾಗೂ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.