ಚಮೇಲಿ ದೇವಿ ಜೈನ್ ಅಪ್ರತಿಮ ಮಹಿಳಾ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಯಾಗಿದ್ದು, ತೀರ್ಪುಗಾರರು ಸುರಕ್ಷಾ ಅವರ ವರದಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಾ.09 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಡಿ.02 ರಿಂದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಕುಷ್ಠರೋಗಿಗಳು ಆಧಾರ್ ನೋಂದಣಿ ಹಾಗೂ ಅದರಿಂದ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗದೇ ಎದುರಿಸುತ್ತಿದ್ದ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿತ್ತು. ಇದೇ ಸಮಸ್ಯೆ ಎದುರಿಸುತ್ತಿದ್ದ ಸಜೀದಾ ಬೇಗಂ (65) ಅವರ ಬಗ್ಗೆಯೂ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಪ್ರಕಟವಾಗಿತ್ತು.