ಲೋಕಾಯುಕ್ತ ಕಚೇರಿಗೆ ಬಂದಿದ್ದ ತುಮಕೂರು ಮೂಲದ ಆರೋಪಿ ತೇಜಸ್ ಶರ್ಮಾ ವಿಶ್ವನಾಥ್ ಶೆಟ್ಟಿ ಅವರಿಗೆ ಚೂರಿ ಇರಿದಿದ್ದಾನೆ. ಚೂರಿ ಇರಿತದಿಂದ ವಿಶ್ವನಾತ್ ಶೆಟ್ಟಿ ಅವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.