ಅದರಂತೆ ಮಂಗಳವಾರ ಅರಣ್ಯ ಭವನದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತಾದರೂ, ಸಂರಕ್ಷಿತಾರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನಸಂಚಾರ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ. ನಿನ್ನೆ ನಡೆದ ಸಭೆಯಲ್ಲಿ ಕೇರಳ, ತಮಿಳುನಾಡು ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ಅಧಿಕಾರಿಗಳು, ಕರ್ನಾಟಕದ ಅಧಿಕಾರಿಗಳು ಹಾಗೂ ಪರಿಸರವಾದಿಗಳು ಪಾಳ್ಗೊಂಡಿದ್ದರು. ರಾತ್ರಿ ವೇಳೆ ವಾಹನ ಸಂಚಾರ ಪುನಾರಂಭಿಸುವ ಪ್ರಸ್ತಾವಕ್ಕೆ ಪರಿಸರವಾದಿಗಳು ಹಾಗೂ ವನ್ಯಜೀವಿ ಸಂರಕ್ಷಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನಿರ್ಬಂಧ ಮುಂದುವರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.