ಲೋಕಾಯುಕ್ತ ನ್ಯಾಯಮೂರ್ತಿಗೆ ಚಾಕು ಇರಿತ: ಮೇಲ್ನೋಟಕ್ಕೆ ಯಾವುದೇ ತೊಂದರೆ ಇಲ್ಲ- ಸಿಎಂ ಸಿದ್ದರಾಮಯ್ಯ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ಮೇಲ್ನೋಟಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮಲ್ಯ ಆಸ್ಪತ್ರೆ ವ್ಯದ್ಯರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು :ಚಾಕು ಇರಿತಕ್ಕೊಳಗಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ಮೇಲ್ನೋಟಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮಲ್ಯ ಆಸ್ಪತ್ರೆ ವ್ಯದ್ಯರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಕು ಇರಿತದಿಂದ ವಿಶ್ವನಾಥ ಶೆಟ್ಟಿ ಚಿಕಿತ್ಸೆ ಪಡೆಯುತ್ತಿರುವ  ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ ಶೆಟ್ಟಿ ಅವರಿಗೆ ಮೂರು- ನಾಲ್ಕು ಕಡೆ ಚೂರಿಯಿಂದ ಇರಿಯಲಾಗಿದ್ದು, ಕೊಲೆ ಯತ್ನ ಎನಿಸುತ್ತದೆ ಎಂದರು.

ಆರೋಪಿ ತೇಜಸ್ ಶರ್ಮಾ ಲೋಕಾಯುಕ್ತರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇದೆ.ಈ ಸಂಬಂಧ ವಿಚಾರಣೆಗೆಂದು ಬಂದಿದ್ದ ವೇಳೆಯಲ್ಲಿ ಕಚೇರಿಯ ಒಳಗೆ ಒಬ್ಬನೇ ಹೋಗಿ ಆರೋಪಿ ಕೃತ್ಯವೆಸಗಿದ್ದಾನೆ ಎಂದು ತಿಳಿಸಿದರು.

ಈ ಹಿಂದೆ  ಎಂದೂ ಇಂತಹ ಯಾವುದೇ ರೀತಿಯ ಘಟನೆ ಆಗಿರಲಿಲ್ಲ. ಆರೋಪಿ ಬಗ್ಗೆ ಪೂರ್ಣ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com