ಈ ವೇಳೆ ನಲಪಾಡ್ ಪರ, ಮತ್ತು ವಿದ್ವತ್ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಅಂದರೆ ಮಾರ್ಚ್ 21ರವರೆಗೂ ವಿಸ್ತರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು ವಿದ್ವತ್ ಪರ ವಾದ ಮಂಡಿಸಿದ್ದ ವಕೀಲರು ನಲಪಾಡ್ ಜಾಮೀನು ಅರ್ಜಿ ವಿರೋಧ ವ್ಯಕ್ತಪಡಿಸಿದ್ದರು. ಅಂತೆಯೇ ನಲಪಾಡ್ ವಿರುದ್ಧ ಸಾಕ್ಷ್ಯ ನಾಶ ಆತಂಕ ವ್ಯಕ್ತಪಡಿಸಿದ್ದ ವಿದ್ವತ್ ಪರ ವಕೀಲರು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಿದ್ದರು.