ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಿಎಟಿ ತಡೆ, ಸರ್ಕಾರಕ್ಕೆ ಮುಜುಗರ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗವಣೆಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕ ತಡೆ ನೀಡಿದೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
ಹಾಸನ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗವಣೆಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕ ತಡೆ ನೀಡಿದೆ.
ನಿಯಮ ಬಾಹಿರವಾಗಿ ಅವಧಿಗೆ ಮುನ್ನವೇ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರವನ್ನು ರೋಹಿಣಿ ಅವರು ಸಿಎಟಿ ನಲ್ಲಿ ಪ್ರಶ್ನಿಸಿದ್ದರು. ಜಿಲ್ಲಾಧಿಕಾರಿಗಳ ಮನವಿಯನ್ನು ವಿಚಾರಣೆ ನಡೆಸಿದ ಸಿಎಟಿ ವರ್ಗಾವಣೆ ಆದೇಶಕ್ಕೆ ಮಾರ್ಚ್ 13ರವರೆಗೆ ತಡೆ ನೀಡಿದೆ.
ರೋಹಿಣಿ  ಅವರ ವರ್ಗಾವಣೆ ಸಂಬಂಧ ಆದೇಶವನ್ನು ಮಂಗಳವಾರದಂದು ಹಿಂಪಡೆದಿದ್ದ ನ್ಯಾಯಾಲಯ ಮತ್ತೆ ಬುಧವಾರದಂದು ಒಟ್ಟು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಹೊರಡಿಸಿದ್ದ ಆದೇಶದಲ್ಲಿ ಇವರ ಹೆಸರನ್ನೂ ಸೇರಿಸಿತ್ತು. ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿತ್ತು.
ಸಿಎಟಿ ಈ ಆದೇಶದಿಂದ ರೋಹಿಣಿ ಸಿಂಧೂರಿ ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಇರುಸು ಮುರುಸು ಉಂಟಾಗಿದೆ. 
ಇದೇ ವೇಳೆ ಸರ್ಕಾರ, ವರ್ಗಾವಣೆ ಸಂಬಂಧ ಮಾ.12ರ ಒಳಗೆ ಪ್ರತಿಕ್ರಿಯೆ ನೀಡುವುದಾಗಿ ಸಿಎಟಿ ಗೆ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com