ಬಾಗಲಕೋಟೆ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ, ಒಂದೇ ಕುಟುಂಬದ 9 ಮಂದಿ ಸಾವು

ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟ ದಾರುಣ ಘಟನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬಾಗಲಕೋಟೆ: ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಬಳಿ ಶುಕ್ರವಾರ ನಡೆದಿದೆ.
ಬೆಳಗಾವಿ–ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಚಕ್ಕಡಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಏಳು ಮೃತಪಟ್ಟಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತರನ್ನು ರಕ್ಕಸಗಿ ಗ್ರಾಮದ ಚಂದ್ರಯ್ಯ ಹಿರೇಮಠ ( 48), ಅವರ ಪತ್ನಿ ರತ್ನವ್ವ (46), ಪುತ್ರಿಯರಾದ ಕಾಶಿಬಾಯಿ ( 22), ವಿಜಯಲಕ್ಷ್ಮಿ ( 18), ಗ್ರಾಮಸ್ಥರಾದ ಸಿದ್ದಮ್ಮ ಹೂಗಾರ ( 58), ಗಂಗಮ್ಮ ಹೂಗಾರ ( 58), ಬಸವ್ವ ಗೊರವರ ( 56) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಸಂಗನಬಸವ್ವ ಮಠ (68) ಹಾಗೂ ಗಂಗಮ್ಮ ಗೌಡರ (44) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 
ಹೊಲಕ್ಕೆ ತೊಗರಿ ರಾಶಿ ಮಾಡಲು ತೆರಳಿದ್ದರು. ಅಲ್ಲಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಎತ್ತಿನಗಾಡಿಗೆ ಲಾರಿ ಡಿಕ್ಕಿ ಹೊಡೆದಿದೆ.  ಭೀಕರ ಅಪಘಾತದಲ್ಲಿ ಒಂದು ಎತ್ತು ಕೂಡ ಸಾವಿಗೀಡಾಗಿದ್ದು, ಮತ್ತೊಂದು ತೀವ್ರವಾಗಿ ಗಾಯಗೊಂಡಿದೆ. ಹುನಗುಂದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com