ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಕೊಲೆ ಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ವಿಧಾನ ಸೌಧ, ವಿಕಾಸ ಸೌಧ, ಲೋಕಾಯುಕ್ತ ಕಚೇರಿ, ಎಂ.ಎಸ್ ಬಿಲ್ಡಿಂಗ್ ಸೇರಿದಂತೆ ಹಲವು ಪ್ರದೇಶಗಳಿಗೆ ಬಿಗಿ ಭದ್ರತೆ ಒದಗಿಸುವ ದೃಷ್ಟಿಯಿಂದ ಇಂದು ಡಿಜಿ ಮತ್ತು ಐಜಿಪಿ ಸೇರಿದಂತೆ ಹಲವು ಅಧಿಕಾರಗಳ ಜೊತೆ ರಾಮಲಿಂಗಾ ರೆಡ್ಡಿ ಸಭೆ ನಡೆಸಲಿದ್ದಾರೆ.