ನಾಗೇಶ್ ವಾದ ಸರಣಿಯನ್ನು ಬಲವಾಗಿ ಆಕ್ಷೇಪಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಂ.ಎಸ್.ಶ್ಯಾಮಸುಂದರ್, ‘ತನಿಖಾಧಿಕಾರಿಗಳು ವೈದ್ಯರ ವರದಿ ನೀಡುವಂತೆ ಹಲವು ಬಾರಿ ಕೇಳಿದ್ದರೂ ಕೊಟ್ಟಿಲ್ಲ. ವಾಸ್ತವದಲ್ಲಿ ಇದೊಂದು ಗೋಪ್ಯ ವರದಿ. ಇದನ್ನು ರೋಗಿ ಹೊರತುಪಡಿಸಿ ಬೇರಾರಿಗೂ ಕೊಡುವಂತಿಲ್ಲ. ಆದರೆ, ಇದು ವಕೀಲರ ಕೈಗೆ ಹೇಗೆ ದೊರೆಯಿತೊ’ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.