ಫೆಬ್ರವರಿ 16ರಂದು ಪ್ರಕಟವಾದ ತೀರ್ಪಿನಂತೆ ಆರು ವಾರಗಳ ಒಳಗೆ ಕೇಂದ್ರ ಸರಕಾರ ಕ್ರಮವನ್ನು ಕೈಗೊಳ್ಳಬೇಕಾಗಿದ್ದು, ಅದರ ಬಗ್ಗೆ ಚರ್ಚಿಸಲು ಶುಕ್ರವಾರ ಜಲಸಂಪನ್ಮೂಲ ಸಚಿವಾಲಯ ಕರ್ನಾಟಕ, ತಮಿಳುನಾಡು ಮತ್ತು ಪುದುಚೆರಿಯ ಉನ್ನತಾಧಿಕಾರಿಗಳ ಸಭೆಯನ್ನು ಕರೆದಿತ್ತು. ಮಂಡಳಿ ಹೇಗಿರಬೇಕು, ಸದಸ್ಯರ ಕರ್ತವ್ಯ ಮತ್ತು ಜವಾಬ್ದಾರಿಗಳ ಸ್ವರೂಪದ ಬಗ್ಗೆ ಸಲಹೆಗಳನ್ನು ನೀಡುವಂತೆ ಸಭೆಯಲ್ಲಿ ಕೋರಲಾಯಿತು. ಜಲಸಂಪನ್ಮೂಲ ಖಾತೆ ಕಾರ್ಯದರ್ಶಿ ಯು.ಪಿ. ಸಿಂಗ್ ನೇತೃತ್ವದ ಸಭೆಯಲ್ಲಿ ಕರ್ನಾಟಕವನ್ನು ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಭಾಗವಹಿಸಿದ್ದರು.