ಜೈಲು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಜೈಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ನಾವು ಪರಿಶೀಲಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬಂಧಿಖಾನೆಗೆ ಸೂಚಿಸಿದೆ. ಅಲ್ಲದೆ ಈ ಕುರಿತು ಆರು ವಾರಗಳಲ್ಲಿ ವಿಸ್ತೃತ ವರದಿ ನೀಡುವಂತೆ ಪೊಲೀಸ್ ಮಹಾ ನಿರ್ದೇಶಕ(ಬಂಧಿಖಾನೆ)ರಿಗೂ ನೋಟಿಸ್ ನೀಡಿದೆ.