ಬಂಧಿತ ಆರೋಪಿಗಳೆಲ್ಲರೂ ಮಲ್ಲೇಶ್ವರಂ, ಬನಶಂಕರಿ ನಿವಾಸಿಗಳೆಂದು ತಿಳಿದುಬಂದಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ. ರಾಘವೇಂದ್ರ ಶ್ರೀನಾಥ್ ಎಂಬಾತ ವಿಕ್ರಂ ಇನ್ವೆಸ್ಟ್ ಮೆಂಟ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಸೂತ್ರಂ ಸುರೇಶ್ ಮಾಜಿ ಕ್ರೀಡಾ ವರದಿಗಾರನಾಗಿದ್ದ ಎಂದು ತಿಳಿದುಬಂದಿದೆ. ಇವರುಗಳು ಖ್ಯಾತ ಕ್ರೀಡಾಪಟುಗಳು, ರಾಜಕಾರಣಿಗಳು, ಸಿನಿಮಾ ನಟರನ್ನೇ ಗುರಿಯಾಗಿಸಿಕೊಂಡು ವಂಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.