ಮಂಗಳೂರು ಪಬ್ ದಾಳಿ ಪ್ರಕರಣ: 26 ಆರೋಪಿಗಳು ದೋಷಮುಕ್ತ

2009ರ ಮಂಗಳೂರು ಪಬ್ ದಾಳಿ ಪ್ರಕರಣದ ಸಂಬಂಧ ಬಂಧಿಸಲಾಗಿದ್ದ 26 ಆರೋಪಿಗಳು ಆರೋಪಮುಕ್ತರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮಂಗಳೂರು: 2009ರ ಮಂಗಳೂರು ಪಬ್ ದಾಳಿ ಪ್ರಕರಣದ ಸಂಬಂಧ ಬಂಧಿಸಲಾಗಿದ್ದ 26 ಆರೋಪಿಗಳು ಆರೋಪಮುಕ್ತರಾಗಿದ್ದಾರೆ.
ವರ್ಷಗಳ ಕಾಲ ನಡೆದ ವಾದ, ಪ್ರತಿವಾದಗಳನ್ನು ಆಲಿಸಿದ ದಕ್ಷಿಣ ಕನ್ನಡ 3ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು ಆರೋಪಿಗಳನ್ನು ದೊಷಮುಕ್ತಗೊಳಿಸಿದೆ.
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿದಂತೆ ಯಾವ ಆರೋಪಿಗಳ ವಿರುದ್ಧವೂ ಸರಿಯಾದ ಸಾಕ್ಷಾಧಾರಗಳಿಲ್ಲದ ಕಾರಣ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಗಳಾಗಿದ್ದ 30 ಮಂದಿಯಲ್ಲಿ ;26 ಮಂದಿಯನ್ನು ಆರೋಪಮುಕ್ತರನ್ನಾಗಿ ಮಾಡಿದೆ. 
ಪ್ರಕರಣದ ಇನ್ನುಳಿದ ಆರೋಪಿಗಳಲ್ಲಿ ಮೂವರು ಆರೋಪಿಗಳು ವಿದೇಶದಲ್ಲಿ ನೆಲೆಸಿದ್ದರೆ ಇನ್ನೊಬ್ಬರು ಮೃತಪಟ್ಟಿದ್ದಾರೆ. 
ಏನಿದು ಪ್ರಕರಣ? 
2009ರ ಜನವರಿ 24,ರಂದು ಮಂಗಳೂರಿನ ಬಲ್ಮಠ ರಸ್ತೆಯಲ್ಲಿರುವ 'ಅಮ್ನೇಸಿಯಾ - ದಿ ಲಾಂಜೆ' ಪಬ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದರು. ಪಬ್ ನಲ್ಲಿ ಮೋಜಿನಲ್ಲಿ ತೊಡಗಿದ್ದ ಯುವಕ, ಯುವತಿಯರ ಮೇಲೆ ಹಲ್ಲೆ ನಡೆಸಿದ್ದ ಕಾರ್ಯಕರ್ತರು ನೈತಿಕ ಪೋಲೀಸ್ ಗಿರಿ ಮೆರೆದಿದ್ದರು.ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇಂದು ಈ ಸಂಬಂಧ ನ್ಯಾಯಾಲಯದ ತೀರ್ಪು ಹೊರಬೀಳುವುದರೊಂದಿಗೆ ಹಲವು ವರ್ಷಗಳ ವಿವಾದಾತ್ಮಕ ಪ್ರಕರಣಕ್ಕೆ ಅಂತಿಮ ತೆರೆ ಎಳೆದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com