ವಿಧಾನಸಭಾ ಚುನಾವಣೆ ಎದುರಾಗುವ ಸಂದರ್ಭದಲ್ಲಿ ಇಂತಹದ್ದೊಂದು ಪತ್ರವನ್ನು ಐಪಿಎಸ್ ಅಧಿಕಾರಿಗಳ ಸಂಘ ಬರೆದಿರುವುದು ಸರ್ಕಾರಕ್ಕೆ ನುಂಗಲಾರದ ಬಿಸಿತುಪ್ಪದಂತಾಗಿದ್ದು, ರತ್ನಪ್ರಭಾ ಅವರಿಗೆ ಪತ್ರ ಬಂದ ಬೆನ್ನಲ್ಲೇ ನಿನ್ನೆ ರಾತ್ರಿ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ರಾಜು ಅವರೊಂದಿಗೆ ಸಭೆ ನಡೆಸಿ, ಇಂತಹ ಪೊಲೀಸ್ ಅಧಿಕಾರಿಗಳ ಬಂಡಾಯವನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.