ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರ: ಆರ್‏ಎಸ್‏ಎಸ್ ಹೇಳಿಕೆಗೆ ಹೊರಟ್ಟಿ ಕಿಡಿ

ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್ ) ಹೇಳಿಕೆ ವಿರುದ್ಧ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಹೊರಟ್ಟಿ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದ್ದಾರೆ.
ಬಸವರಾಜ ಹೊರಟ್ಟಿ (ಸಂಗ್ರಹ ಚಿತ್ರ)
ಬಸವರಾಜ ಹೊರಟ್ಟಿ (ಸಂಗ್ರಹ ಚಿತ್ರ)

ಹುಬ್ಬಳ್ಳಿ: ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್ ) ಹೇಳಿಕೆ ವಿರುದ್ಧ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಹೊರಟ್ಟಿ ಕಿಡಿಕಾರಿದ್ದಾರೆ.

 ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲಿಂಗಾಯತ ಸ್ವತಂತ್ರ ಧರ್ಮವಾಗಲು ಬಿಡುವುದಿಲ್ಲ ಎನ್ನಲು ನೀವ್ಯಾರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು  ಪ್ರಶ್ನಿಸಿದರು. ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿ ಸುರೇಶ ಭೈಯ್ಯಾಜಿ ಅವರು ನಮ್ಮ ಹೋರಾಟದಲ್ಲಿ ಮೂಗು ತೂರಿಸುವುದು ಬಿಟ್ಟು ತಮ್ಮ ಸಂಘದ ಕಾರ್ಯ ನೋಡಿಕೊಳ್ಳಲಿ ಎಂದು ತಾಕೀತು ಮಾಡಿದರು.

ನಾನು ಲಿಂಗಾಯತ ಎಂದು ಎದೆತಟ್ಟಿ ಹೇಳುತ್ತೇನೆ. ಅದೇ ರೀತಿ ಯಡಿಯೂರಪ್ಪನವರು ತಾವು ವೀರಶೈವ ಎಂದು ಹೇಳಲಿ ಎಂದು ಸವಾಲು ಹಾಕಿದ ಹೊರಟ್ಟಿ, ಈ ಹೋರಾಟದಲ್ಲಿ ನಮಗೆ ನ್ಯಾಯ ಸಿಗದಿದ್ದರೆ ನ್ಯಾಯಾಲಯಕ್ಕೆ ಮೊರೆ ಹೋಗುವುದಾಗಿ ತಿಳಿಸಿದರು.

 ಉದ್ಯಮಿ ವಿಜಯ ಸಂಕೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿದ ಹೊರಟ್ಟಿ, ‘ನ್ಯಾಯಕ್ಕಾಗಿ, ಮೀಸಲಾತಿಗಾಗಿ ಹೋರಾಡುವುದು ನಮ್ಮ ಹಕ್ಕು. ಅದು ಭಿಕ್ಷಾಟನೆ ಅಲ್ಲ. ಎಲ್ಲರೂ ತಮ್ಮ ಜಾತಿ, ಧರ್ಮಕ್ಕಾಗಿ ಹೋರಾಡುತ್ತಾರೆ. 'ಅಹಿಂಸಾ' ಒಕ್ಕೂಟದ ಶೇ 82ರಷ್ಟು ಜನ ಬಡ್ತಿ ಮೀಸಲಾತಿ ರದ್ದತಿಗೆ ಹೋರಾಡುತ್ತಿದ್ದಾರೆ. ಅದು ಭಿಕ್ಷಾಟನೆಯೇ?’ ಎಂದು ಪ್ರಶ್ನಿಸಿದರು.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com