ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ ಯದುವೀರ್ ಅವರು, ನಾನು ರಾಜಕೀಯಕ್ಕೆ ಬರುವುದಿಲ್ಲ, ಈ ಕುರಿತು ಆಸಕ್ತಿಯೂ ಇಲ್ಲ. ನಾನು ಮುಂದಿನ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗೂ ಸ್ಪರ್ಧೆ ಮಾಡುವುದಿಲ್ಲ. ಹಿಂದಿನ ರಾಜರು ಜನರ ಸಮಸ್ಯೆಗಳನ್ನು ಬಗೆಹರಿಸಲು ಸದಾ ಮುಂದೆ ಬರುತ್ತಿದ್ದರು. ಅದೇ ರೀತಿ ನಾನು ಅವರ ಮಾರ್ಗದಲ್ಲೇ ಹೋಗುತ್ತಿದ್ದೇನೆ. ಜನರಿಗೆ ಏನಾದರೂ ಕೊಡುಗೆ ನೀಡಲು ಇಷ್ಟಪಡುತ್ತೇನೆಯೇ ಹೊರತು ರಾಜಕೀಯಕ್ಕೆ ಹೋಗುವುದಿಲ್ಲ ಹೇಳಿದರು.