ಮೂಲಗಳ ಪ್ರಕಾರ ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ನೊಟೀಸ್ಗೆ ನಾಳೆಯೊಳಗೆ ಉತ್ತರ ನೀಡದಿದ್ದಲ್ಲಿ ಶರ್ಮಾ ವಿರುದ್ಧ ಯುಪಿಎಸ್ಸಿಗೆ ಪತ್ರ ಬರೆಯಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ರತ್ನಪ್ರಭಾ ಅವರು ಶರ್ಮಾ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ಶರ್ಮಾ ಅವರು ನಾಳೆ ಉತ್ತರಿಸದಿದ್ದಲ್ಲಿ ಯುಪಿಎಸ್ಸಿಗೆ ಪತ್ರ ರವಾನೆ ಆಗಲಿದೆ. ಹಾಗೂ ಶರ್ಮಾ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಮನವಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.