ಕೊಲಂಬಿಯಾ ಏಷಿಯಾದಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಮಾಜಿ ನರ್ಸ್ ಮಾ.10 ರಂದು ದ್ವಿಚಕ್ರ ವಾಹನದಲ್ಲಿ ದೇವಸ್ಥಾನಕ್ಕೆ ಹೊರಟಿದ್ದರು. ಚಿಕ್ಕಬಾಣಾವರ-ಹೆಸರುಘಟ್ಟ ಮುಖ್ಯ ರಸ್ತೆಯಲ್ಲಿದ್ದ ಹಂಪ್ ನಲ್ಲಿ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು. ಘಟನೆಯಿಂದಾಗಿ ಆಕೆ ಬದುಕುವುದಿಲ್ಲ ಎಂಬ ವಿಷಯ ತಿಳಿದ ಆಕೆಯ ಪತಿ ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಇದರಿಂದ ರಶ್ಮಿ ಎಂಬುವವರಿಗೆ ಮರು ಜೀವ ದೊರಕಿದೆ.