ವಿದ್ವತ್ ಮೇಲೆ ದಾಳಿ ನಡೆಸಿರುವುದು ವೀಡಿಯೋ ದೃಶ್ಯಗಳಿಂದ ಸಾಬೀತಾಗಿದೆ. ನಲಪಾಡ್ ಪ್ರಭಾವಿ ವ್ಯಕ್ತಿಯ ಮಗ. ಅವನು ಅದಾಗಲೇ ವಿದ್ವತ್ ನ ವೈದ್ಯಕೀಯ ದಾಖಲೆಗಳ ಪ್ರತಿ ಪಡೆದುಕೊಂಡಿರುವುದು ಅವನ ಪ್ರಭಾವೀ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಪ್ರಕರಣದ ತನಿಖೆ ಪೂರ್ಣವಾಗುವವರೆಗೆ ಜಾಮೀನು ನೀಡುವುದಕ್ಕೆ ಆಗದು ಎಂದು ನ್ಯಾಯಮೂರ್ತಿಗಳು ಹೇಳಿದರು.