ಚೂರಿ ಇರಿತಕ್ಕೆ ಒಳಗಾಗಿದ್ದ ವಿಶ್ವನಾಥ್ ಶೆಟ್ಟಿಯವರು ನಗರದ ಮಲ್ಯ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ವಿಶ್ವನಾಥ್ ಶೆಟ್ಟಿಯವರು ಸಂಪೂರ್ಣವಾಗಿ ಗುಣಮುಖರಾಗಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆಂದು ತಿಳಿದುಬಂದಿದೆ.
ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆಯೇ ವಿಶ್ವನಾಥ್ ಶೆಟ್ಟಿಯವರು ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರಿಗೆ ಧನ್ಯವಾದಗಳನ್ನು ಹೇಳಿದರು.
ಮಲ್ಯ ಆಸ್ಪತ್ರೆಯ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳು ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಜೊತೆಗೆ ರಾಜ್ಯ ಜನತೆಗೆ ಅಬಾರಿಯಾಗಿದ್ದೇನೆಂದು ತಿಳಿಸಿದ್ದಾರೆ.
ಮಾ.7 ರಂದು ಲೋಕಾಯುಕ್ತ ಕಚೇರಿಗೆ ಪ್ರಕರಣ ದಾಖಲಿಸುವ ಸಲುವಾಗಿ ಬಂದ ತೇಜಸ್ ರಾಜ್ ಶರ್ಮಾ ಎಂಬ ವ್ಯಕ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದ. ಕೂಡಲೇ ಸಿಬ್ಬಂದಿಗಳು ವಿಶ್ವನಾಥ್ ಶೆಟ್ಟಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.