ವೆಂಕಟೇಶ ಮೂರ್ತಿ, ಬರಗೂರು, ಮನು ಬಳಿಗಾರ್ ಗೆ ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪುರಸ್ಕಾರ

ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್‌ ನೀಡುವ ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಾದಂಬರಿ, ಕಥಾ ಪ್ರಶಸ್ತಿಗಳು ಘೋಷಣೆಯಾಗಿದೆ.
ಬೆಟಗೇರಿ ಕೃಷ್ಣಶರ್ಮ
ಬೆಟಗೇರಿ ಕೃಷ್ಣಶರ್ಮ
Updated on
ಬೆಳಗಾವಿ: ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್‌ ನೀಡುವ ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಾದಂಬರಿ, ಕಥಾ ಪ್ರಶಸ್ತಿಗಳು ಘೋಷಣೆಯಾಗಿದೆ.  
2017–18ನೇ ಸಾಲಿನ ಪ್ರಶಸ್ತಿಗಳು ಘೋಷಣೆಯಾಗಿದ್ದು ಕಾವ್ಯ ಪುರಸ್ಕಾರಕ್ಕೆ ಕವಿ ಎಚ್.ಎಸ್. ವೆಂಕಟೇಶಮೂರ್ತಿ, ಕಾದಂಬರಿ ಪ್ರಶಸ್ತಿಗೆ ಬರಗೂರ ರಾಮಚಂದ್ರಪ್ಪ ಹಾಗೂ ಕಥಾ ಪುರಸ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಆಯ್ಕೆಯಾಗಿದ್ದಾರೆ.
ಎಲ್ಲಾ ಪ್ರಶಸ್ತಿಗಳೂ 50 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಹೊಂದಿರಲಿದೆ. 
ಬೆಟಗೇರಿ ಕೃಷ್ಣಶರ್ಮ ಅವರ ಜನ್ಮ ದಿನವಾದ ಏ..16ರಂದು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಗುತ್ತದೆ. ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕೇಂದ್ರ ಸಾಹಿತ್ಯ ಅಕಾಡೆಮಿಯ  ಅಧ್ಯಕ್ಷ ಚಂದ್ರಶೇಖರ ಕಂಬಾರ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿಗಳ ಪ್ರಧಾನ ಮಾಡಲಿದ್ದಾರೆ ಎಂದು ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್‌ ಅಧ್ಯಕ್ಷರಾದ ರಾಘವೇಂದ್ರ ಪಾಟೀಲ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com