ಹುತಾತ್ಮ ಯೋಧ ಚಂದ್ರ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇಡುವ ಬದಲು ಅಧಿಕಾರಿಗಳು ಆಸ್ಪತ್ರೆಯ ಶವಾಗಾರದಲ್ಲಿ ಇಟ್ಟಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಜಿಲ್ಲಾ ಆಡಳಿತ ಮಂಡಳಿ ವಿರುದ್ಧ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಅಲ್ಲದೆ, ಅಧಿಕಾರಿಗಳ ವಿರುದ್ಧ ಘೋಷಣಾ ವಾಕ್ಯಗಳನ್ನು ಕೂಗಲು ಆರಂಭಿಸಿದ್ದರು. ಆಡಳಿತ ಮಂಡಳಿ ಹುತಾತ್ಮ ಯೋಧನನ್ನು ಸಾಮಾನ್ಯ ಮನುಷ್ಯರಂತೆ ನೋಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದರು.