ಶನಿವಾರ ಮಧ್ಯಾಹ್ನ 12.45 ರ ಸಮಯದಲ್ಲಿ ರವಿಶಂಕರ್ ಹೊಸಕೆರೆ ಹಳ್ಳಿ ಬಳಿಯ ನೈಸ್ರಸ್ತೆ ಜಂಕ್ಷನ್ ಸಮೀಪ ಹೋಗುತ್ತಿದ್ದಾಗ ಲಾರಿಯೊಂದು ಬಂದು ಡಿಕ್ಕಿ ಹೊಡೆದಿದೆ. ಹೀಗೆ ಡಿಕ್ಕಿ ಹೊಡೆದ ರಭಸಕ್ಕೆ ಪೇದೆ ರವಿಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ ಹೀಗೆ ಗುದ್ದಿದ ವಾಹನ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.