ಟ್ವೀಟ್ ವಿವಾದ ಕುರಿತಂತೆ ಏಳು ದಿನಗಳಲ್ಲಿ ವಿವರಣೆ ನೀಡಬೇಕೆಂದು ಹರ್ಷ ಮೊಯ್ಲಿಗೆ ಸೂಚನೆ ನೀಡಿದ್ದು ಕೆಪಿಸಿಸಿ ಕಛೇರಿ ಕಾರ್ಯದರ್ಶಿಗಳು ವೀರಪ್ಪ ಮೊಯ್ಲಿ ಪುತ್ರ ಹರ್ಷ ಅವರಿಗೆ ನೋಟೀಸ್ ಜಾರಿ ಮಾಡಿದ್ದಾರೆ. ಕಾರ್ಕಳ ವಿಧಾನಸಭೆ ಕ್ಷೇತ್ರದಿಂಡ ಹರ್ಷ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ವಿವಾದಾತ್ಮಕ ಟ್ವೀಟ್ ಹಾಕಲ್ಪಟ್ಟ ಅವರ ತಂದೆಯ ಟ್ವಿಟ್ಟರ್ ಖಾತೆಯನ್ನು ಹರ್ಷ ನಿರ್ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ.