ಪ್ರತ್ಯೇಕ ಧರ್ಮಕ್ಕೆ ರಾಜ್ಯ ಸರ್ಕಾರದ ಶಿಫಾರಸು ವಿರೋಧಿಸಿ ವೀರಸೈವ ಸ್ವಾಭಿಮಾನಿ ಬಳಗದವರು ನಗರದ ಪಟೇಲ್ ವೃತ್ತದಲ್ಲಿ ಹೋರಾಟಕ್ಕಿಳಿದಿದ್ದರು. ವೀರಶೈವ ಸ್ವಾಭಿಮಾನ ಬಳಗದ ಸದಸ್ಯರು ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್, ವಿನಯ್ ಕುಲಕರ್ಣಿ, ಸೇರಿದಂತೆ ಹಲವರ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.