ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಿರುವ ಪ್ರಾಧ್ಯಾಪಕರು
ರಾಜ್ಯ
ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಿರುವ ಪ್ರಾಧ್ಯಾಪಕರು
ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
6 ನೇ ವೇತನ ಆಯೋಗದ ಶಿಫಾರಸ್ಸುಗಳಲ್ಲಿ ಉಪನ್ಯಾಸಕರ ವೇತನ ತಾರತಮ್ಯವನ್ನು ವಿರೋಧಿಸಿ, ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಉಪನ್ಯಾಸಕರ ಒಕ್ಕೂಟ ಮಾ.22 ರಿಂದ ಮೌಲ್ಯಮಾಪನವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.
ಮಾ.22 ರಿಂದ ದ್ವಿತಿಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿತ್ತು. ನಾವು ಪ್ರತಿಭಟನೆ ಮಾಡದೇ ಇದ್ದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವುದಿಲ್ಲ, ಪಿಯು ಕಾಲೇಜು ಉಪನ್ಯಾಸಕರಿಗೆ 53,100 ರೂವರೆಗೆ ವೇತನ ಹೆಚ್ಚಾಗಬೇಕು ಆದರೆ 6 ನೇ ವೇತನ ಆಯೋಗದ ವೇತನದ ಶಿಫಾರಸ್ಸಿನ ಪ್ರಕಾರ 43,000 ರೂ ಗಳವರೆಗಷ್ಟೇ ವೆತನ ಹೆಚ್ಚಳ ಮಾಡಲಾಗಿದ್ದು, ಇದು ಪಿಯು ಉಪನ್ಯಾಸಕರ ಆಕ್ರೋಶಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ