"ಸರ್ಕಾರವು ಮೆಟ್ರೋ ನೌಕರರನ್ನು ಎಸ್ಮಾ ವ್ಯಾಪ್ತಿಗೆ ತಂದಿದೆ. ಇದಾಗಿ ನೌಕರರು ಇದೇ 22ರಂದು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಎಸ್ಮಾ ಜಾರಿ ಸಂಬಂಧ ನ್ಯಾಯಾಲಯ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಬೇಕು ಎಂದು ಸರ್ಕಾರದ ಹೆಚ್ಚುವರಿ ಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಮೆಟ್ರೋ ನಿಗಮವು ನೌಕರರ ಬೇಡಿಕೆಗಳನ್ನು ಈಡೇರಿಸುವ ಆಸಕ್ತಿ ತಾಳುತ್ತಿಲ್ಲ. ಸರ್ಕಾರ ಮೆಟ್ರೋ ನೌಕರರ ಸಂಘಕ್ಕೆ ಮಾನ್ಯತೆ ನಿಡಬೇಕಿದೆ ಅಲ್ಲದೆ ನ್ಯಾಯಾಲಯವು ಎಸ್ಮಾ ಗೆ ನೀಡಿದ ತಡೆಯಾಜ್ಞೆಯನ್ನು ತೆರವು ಮಾಡಬಾರದು ಎಂದು ನೌಕರರ ಸಂಗದ ಪರ ವಕೀಲರು ಮನವಿ ಸಲ್ಲಿಸಿದ್ದರು.