ತೆರಿಗೆ ವಂಚನೆ, ಸಾಕ್ಷ್ಯ ನಾಶ ಆರೋಪ: ಸಚಿವ ಡಿಕೆಶಿ ನ್ಯಾಯಾಲಯಕ್ಕೆ ಹಾಜರು

ಐಟಿ ಇಲಾಖೆ ದಾಳಿ ವೇಳೆ ದಾಖಲೆ ನಾಶ ಪಡಿಸಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್​ ...
ಸಚಿವ ಡಿ.ಕೆ ಶಿವಕುಮಾರ್ (ಸಂಗ್ರಹ ಚಿತ್ರ)
ಸಚಿವ ಡಿ.ಕೆ ಶಿವಕುಮಾರ್ (ಸಂಗ್ರಹ ಚಿತ್ರ)
Updated on
ಬೆಂಗಳೂರು:  ಐಟಿ ಇಲಾಖೆ ದಾಳಿ ವೇಳೆ ದಾಖಲೆ ನಾಶ ಪಡಿಸಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್​ ಗುರುವಾರ ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಐಟಿಯ ಇಲಾಖೆ ವರದಿ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಸಚಿವ ಡಿ.ಕೆ ಶಿವಕುಮಾರ್  ವಿರುದ್ಧ ಆದಾಯ ತೆರಿಗೆ ವಂಚನೆ, ರೆಸಾರ್ಟ್‌ ಮೇಲೆ ದಾಳಿ ನಡೆಸಿದ ವೇಳೆ ಕೆಲವು ಮಹತ್ವದ ಚೀಟಿ ಹರಿದು ಹಾಕಿರುವುದು, ಅಕ್ರಮವಾಗಿ ಸಾಲ ನೀಡಿ ತೆರಿಗೆ ವಂಚನೆ ಮಾಡಿರುವ ಆರೋಪಗಳಿದ್ದು, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಒಟ್ಟು ಮೂರು ಕ್ರಿಮಿನಲ್‌ ಕೇಸ್‌ಗಳು ದಾಖಲಾಗಿವೆ.
ಈಗಲ್‌ಟನ್‌ ರೆಸಾರ್ಟ್‌ ಮೇಲೆ ಐಟಿ ದಾಳಿ ನಡೆದಾಗ ಅಧಿಕಾರಿಗಳ ಎದುರೇ ಹಣಕಾಸು ವ್ಯವಹಾರದ ಚೀಟಿ ಹರಿದು ಹಾಕಿರುವುದನ್ನು ಅವರು ವಿಚಾರಣೆ ವೇಳೆ ಒಪ್ಪಿಕೊಂಡಿದ್ದರು. ಪ್ರಕರಣದ ವಿಚಾರಣೆ ಆರಂಭವಾಗುವ ಅರ್ಧ ಗಂಟೆಯ ಮುಂಚೆಯೇ ಡಿಕೆಶಿ ಕೋರ್ಟ್​ಗೆ ತಲುಪಿದ್ದು, ಅವರ ಜತೆ ಡಿಕೆಶಿ ಸಹೋದರರಾದ ಸಂಸದ ಡಿ.ಕೆ.ಸುರೇಶ್ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com