ಬಂಧನ ಭೀತಿಯಿಂದ ಡಿಕೆ ಶಿವಕುಮಾರ್ ಪಾರು: ಜಾಮೀನು ಮಂಜೂರು

ಐಟಿ ಇಲಾಖೆ ದಾಳಿ ವೇಳೆ ದಾಖಲೆ ನಾಶ ಪಡಿಸಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್​ ಅವರಿಗೆ...
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಬೆಂಗಳೂರು: ಐಟಿ ಇಲಾಖೆ ದಾಳಿ ವೇಳೆ ದಾಖಲೆ ನಾಶ ಪಡಿಸಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್​ ಅವರಿಗೆ ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 
ಐಟಿಯ ಇಲಾಖೆ ವರದಿ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಇಂದು ಕೋರ್ಟ್ ಮುಂದೆ ಹಾಜರಾದ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು 25 ಸಾವಿರ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಆದೇಶಿಸಿದೆ. 
ಷರತ್ತು ಬದ್ದ ಜಾಮೀನು ನೀಡಿರುವ ಕೋರ್ಟ್ ಡಿಕೆ ಶಿವಕುಮಾರ್ ಅವರಿಗೆ ಸಾಕ್ಷ್ಯ ನಾಶ ಮತ್ತು ಸಾಕ್ಷಿಗಳನ್ನು ಬೆದರಿಸಬಾರದು ಎಂದು ಸೂಚಿಸಿದೆ.
ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ವಂಚನೆ, ರೆಸಾರ್ಟ್‌ ಮೇಲೆ ದಾಳಿ ನಡೆಸಿದ ವೇಳೆ ಕೆಲವು ಮಹತ್ವದ ಚೀಟಿ ಹರಿದು ಹಾಕಿರುವುದು, ಅಕ್ರಮವಾಗಿ ಸಾಲ ನೀಡಿ ತೆರಿಗೆ ವಂಚನೆ ಮಾಡಿರುವ ಆರೋಪಗಳಿದ್ದು, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಒಟ್ಟು ಮೂರು ಕ್ರಿಮಿನಲ್‌ ಕೇಸ್‌ಗಳು ದಾಖಲಾಗಿವೆ.
ಈಗಲ್‌ಟನ್‌ ರೆಸಾರ್ಟ್‌ ಮೇಲೆ ಐಟಿ ದಾಳಿ ನಡೆದಾಗ ಅಧಿಕಾರಿಗಳ ಎದುರೇ ಹಣಕಾಸು ವ್ಯವಹಾರದ ಚೀಟಿ ಹರಿದು ಹಾಕಿರುವುದನ್ನು ಅವರು ವಿಚಾರಣೆ ವೇಳೆ ಒಪ್ಪಿಕೊಂಡಿದ್ದರು. ಪ್ರಕರಣದ ವಿಚಾರಣೆ ಆರಂಭವಾಗುವ ಅರ್ಧ ಗಂಟೆಯ ಮುಂಚೆಯೇ ಡಿಕೆಶಿ ಕೋರ್ಟ್​ಗೆ ತಲುಪಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com