ತೀವ್ರವಾಗಿ ಗಾಯಗೊಂಡಿದ್ದ ಪುಟ್ಟಸ್ವಾಮಿಯವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟಸ್ವಾಮಿಯವರು ಬಲಗಾಲಿನ ಎರಡು ಬೆರಳುಗಳನ್ನು ಕಳೆದುಕೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. 15 ದಿನಗಳೊಳಗಾಗಿ ಪುಟ್ಟಸ್ವಾಮಿಯವರು ಚೇತರಿಸಿಕೊಳ್ಳಲಿದ್ದಾರೆಂದು ವೈದ್ಯರು ಹೇಳಿದ್ದು, ವೈದ್ಯಕೀಯ ವೆಚ್ಚವನ್ನು ಮೃಗಾಲಯವೇ ನೋಡಿಕೊಳ್ಳುತ್ತಿದೆ, ದಾಳಿ ಮಾಡಿದ್ದ ಮೊಸಳೆಗೆ ಭಾಗಶಃ ಕುರುಡಾಗಿದೆ ಎಂದು ಮೃಗಾಲಯದ ನಿರ್ದೇಶಕ ರವಿಶಂಕರ್ ಅವರು ತಿಳಿಸಿದ್ದಾರೆ.